Friday, March 27, 2026

BHAJANE / SATSANG AT SUNANDI - 54

 Thursday, March 26, 2026

Sunandi Eldercare, Kodigehalli, Bengaluru.

SRI RAMANAVAMI SPECIAL

Srirama Bhajane was held at the centre, to mark  Sri Ramanavami, which is being celebrate today and tomorrow.





After Dhyana for a minute and Onkaara, and Prarthane for all Gods, Ganesha Stuthi bhajan was sung by Yoga Jayaram amd myself.





After "Shankaraya.... bhajan" , a short talk was read by me about birth of Rama and importance of Ramanavami.


Mangalarathi was performed with "Jay Jagadisha Hare....." after which Vibhoothi and Prasada Kosambari and KesariBaath was distributed.

ಶ್ರೀ ರಾಮ ರಾಮೇಥಿ ರಮೇ ರಾಮೇ ಮನೋರಮೆ |
ಸಹಸ್ರ ನಾಮ ತತ್ಪಲಯಂ ರಾಮ ನಾಮ ವರಾ ನನೆ |

ರಾಮಯ ರಾಮ ಭದ್ರಾಯ ರಾಮ ಚಂದ್ರಾಯ ವೇದಸೆ |
ರಘುನಾಥಾಯ ನಾಥಯ ಸೀತಾಯ ಪತಯೇ ನಮಃ|

Jai Sriram.....

Lokaa Samasthaa Sukhino Bhavanthu....

Posted 28/3/2026
















Tuesday, March 24, 2026

PHOENIX MALL OF ASIA

 Monday, March 23, 2026

Mall of Asia, Bengaluru

A shaort distance from home here, along Airport Raod,  there is a huge, they call it biggest in Asia, is PHOENIX MALL OF ASIA, we visited along with SupriyaPrem, along with their kids, Avyaan and Aaroosh.





Mall is huge, massive and complex, and you have all international brand shops have their display and exhibits. Valet parking is Rs 250


The Phoenix Mall of Asia, located in Hebbal, Bengaluru, is owned and developed by The Phoenix Mills Limited. It is managed specifically by their subsidiary, Sparkle One Mall Developers Pvt Ltd. The Phoenix Mills Limited is a prominent retail-led developer led by chairman Atul Ruia and part of the Ruia family


There is huge food court, with all kinds of outlets, Play area for kids

Phoenix Mall Of Asia in North Bengaluru is India’s first luxury retail mall to usher in a new age of shopping and leisure. Conceptualized as a destination that breaks the boundaries between retailer and shopper, MOA spells magnificence across millions of square feet. Enriching your time here is unique, sophisticated and chic design – featuring awe-inspiring façades and entrances, nature-inspired installations, dynamic spaces and experiences. Each floor is thematically designed to look straight out of a painting! An ‘open plan’ adds to the fun and seamless journey as you meander through the spaces. What makes MOA incredible is an exceptionally immersive retail atmosphere, where dreams see the light of day. Reminiscent of taking strolls through the fashion capitals of the world.


We were there for 2/3 hours and returned home.


Posted 25/3/2026










1947 MALLESHWARA - RESTAURANT

 Tuesday, March 24, 2026

1947 Restaurant, Malleshwara.

Supriya (D/O Vijalakshmi Ramachandra Bhat ) with her husband Prem Kumar and kids Avyaan and Aroosh were home for visit 



We were out for lunch at 1947 Restaurant and had differnt dishes along with soup.



Also we had roti, curries.  ice cream, pulav, curd rice...





Nice time spent over lunch, having fun and issues with kids.





Back home by 4 pm after litle shopping around.


Posted 24/3/2026








Sunday, March 22, 2026

ಶಿವರಾಮ ಕಾರಂತ ವೇದಿಕೆ - ಮುದ್ದಣನ ಮನೋರಮೆ

 ಭಾನುವಾರ, ಮಾರ್ಚ್ 22, 2026 

ತರಳಬಾಳು ಕೇಂದ್ರ ಮಿನಿ ಹಾಲ್, ಆರ್. ಟಿ. ನಗರ, ಬೆಂಗಳೂರು 

ಸ್ತ್ರೀ ಧ್ವನಿ - ಮುದ್ದಣನ ಮನೋರಮೆ 






ಪ್ರಾರ್ಥನೆ - ರಮ್ಯಾಶ್ರೀ 

ಶಿವರಾಮ ಕಾರಂತ ವೇದಿಕೆ ಇವರ ಮಾರ್ಚ್ ತಿಂಗಳ ವಿಶೇಷ ಕಾರ್ಯಕ್ರಮ " ಸ್ತ್ರೀ ಧ್ವನಿ- ಮುದ್ದಣನ ಮನೋರಮೆ" ಸಂಪನ್ನ ಗೊಂಡಿತು. 



ಡಾ. ನಾ ದಾಮೋದರ ಶೆಟ್ಟಿ 


ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಡಾ ನಾ ದಾಮೋದರ ಶೆಟ್ಟಿ ಮತ್ತು ಪ್ರೊ. ಆರ್ ಸುನಂದಮ್ಮ ಮುಖ್ಯ ಅತಿಥಿಗಳಾಗಿ "ಮುದ್ದಣನ ಮನೋರಮೆಯವರ  ಸ್ವಾರಸ್ಯಕರ ಪ್ರಸಂಗಗಳನ್ನು ವಿವರಿಸಿದರು. 

ಪ್ರೊ. ಬಿ. ಸುನಂದಮ್ಮ 









ಕುಮಾರಿ ರಮ್ಯಾ ಶ್ರೀ ಅವರಿಂದ ಪ್ರಾರ್ಥನೆ ಯಾದ ನಂತರ ವೇದಿಕೆಯ ಅಧ್ಯಕ್ಷೆ ಡಾ ದೀಪಾ ಫಡ್ಕೆ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಿ ಎಲ್ಲರನ್ನೂ ಸ್ವಾಗತಿಸಿದರು. 






ಸೂರ್ಯನಗೂ, ಚಂದ್ರನಗೂ .. ಹಾಡು 

ಉದಯವಾಣಿ  23/3/2026 


ಶ್ರೀಮತಿ ಚೇತನ ಹೆಗಡೆ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಶ್ರೀಮತಿ ಸಂಧ್ಯಾ ಅವರು ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. 

Posted  23/3/2026 






 

Saturday, March 21, 2026

CHANDRAMANA YUGADI 2026

Thursday, March 19, 2026

Birthimane, Bengaluru.





It's beginning of New Year as per Hindu Calender, Called Yugadi, beginning of Yuga.

We had at home sons Ravi, Rishi, Kavitha and Grand children Atharv & Urvi (Both born in March/April 2021)



FUN TIME 


Kids had good time playing and enjoying, Mom prepared nice lunch and Pathrode.





It was a day to remember and cherish.


Posted 21/3/2026






Friday, March 20, 2026

"ಓಂ" ಕಾರದ ಅರ್ಥ ಏನು ?

 Friday, March 20, 2026

WhatsApp Forwarded

"ಓಂಕಾರ"ವನ್ನು ಎಲ್ಲಾ ಮಂತ್ರಗಳ ರಾಜ ಎಂದು ಕರೆಯಲಾಗುತ್ತದೆ. ಯಾಕೆಂದರೆ ಎಲ್ಲಾ ಮಂತ್ರಗಳ ಮೂಲವೇ "ಓಂ".. 

"ಓಂಕಾರ"ವು ಅನಂತವಾದ ಶಕ್ತಿಯನ್ನುಪ್ರತಿನಿಧಿಸುತ್ತದೆ. "ಓಂಕಾರ"ಕ್ಕೆ ಭಾರತೀಯ ಸಂಸ್ಕೃತಿಯಲ್ಲಿ ಅತೀ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ. 

ದೇವರ ನಾಮಸ್ಮರಣೆಯೂ "ಓಂ" ಶಬ್ದದಿಂದಲೇ ಆರಂಭವಾಗುತ್ತದೆ. "ಓಂಕಾರ"ದ ಮೂಲಕ ಆರಂಭವಾಗುವ ದೇವರ ನಾಮಾರ್ಚನೆಯು ಹೆಚ್ಚು ಪರಿಣಾಮಕಾರಿಯಾದುದು ಎಂದು ವೇದದಲ್ಲಿ ಉಲ್ಲೇಖ ಮಾಡಲಾಗಿದೆ.

"ಓಂ" ಎನ್ನುವುದು ಒಂದು ಅಕ್ಷರವಲ್ಲ. ಅದು "ಅ.. ಉ.. ಮ" ಎಂಬ ಮೂರು ಅಕ್ಷರಗಳ ಸಂಗಮ. 

ಅ ಎಂದರೆ ಸೃಷ್ಟಿ....ಉ ಎಂದರೆ ವಿಕಸನ...ಮ ಎಂದರೆ ಮೌನ ಹಾಗೂ ವಿನಾಶ. 

ಹಾಗಾಗಿ ಈ ಒಂದೇ ಪದವು ಸೃಷ್ಟಿಯ ಆದಿ ಮತ್ತು ಅಂತ್ಯವನ್ನು ಪ್ರತಿಬಿಂಬಿಸುತ್ತದೆ. ಓಂಕಾರವನ್ನು ಪ್ರತಿದಿನ ಪಠಿಸಿದರೆ ನಿಮ್ಮ ಒತ್ತಡಗಳೆಲ್ಲಾ ನಿವಾರಣೆಯಾಗಿ ಮನಸ್ಸು ಆಹ್ಲಾದಕರವಾಗಿರುತ್ತದೆ.

🙏 ಮುಂಜಾನೆ ಎದ್ದು ಸ್ನಾನಾದಿ ಕರ್ಮಗಳನ್ನು ಮುಗಿಸಿ, ಕುಳಿತುಕೊಳ್ಳಿ, ನಿಮ್ಮ ಕಣ್ಣುಗಳನ್ನು ಮುಚ್ಚಿ ನಿರಾಳರಾಗಿ, ನಿಮ್ಮ ಎರಡೂ ಹುಬ್ಬಿನ ಮಧ್ಯಭಾಗವನ್ನು ಕೇಂದ್ರೀಕರಿಸಿ, ಓಂಕಾರವನ್ನು ನಿಧಾನವಾಗಿ ಪಠಿಸಿ. 21 ಬಾರಿ ಪಠಿಸುವುದು ಒಳ್ಳೆಯದು, ನಿಮ್ಮ ಉಸಿರಾಟದ ಮೂಲಕ ಪಠಣವನ್ನು ಲೆಕ್ಕಹಾಕಬಹುದು....

"ಓಂಕಾರ"ವನ್ನು ಹೇಳುವಾಗ ಮೂಗಿನಿಂದ ಒಳ ಸೇರಿದ ಗಾಳಿ ಅದೇ ಲಯದಲ್ಲಿ ಗಂಟಲು, ಎದೆ ಕೊನೆಗೆ ನಾಬಿಯ ಸುತ್ತಲೂ ವ್ಯಾಪಿಸಿ ಮತ್ತೂ ಕೆಳಗೆ ಹೋಗಿ ದೇಹದ ತುಂಬೆಲ್ಲಾ ವ್ಯಾಪಿಸಿ ನಿಧಾನಕ್ಕೆ ಉಸಿರು ಬಿಟ್ಟಾಗ ದೇಹದಲ್ಲಿ ಒಂದು ಕಂಪನ ಏರ್ಪಡುತ್ತದೆ....

ಉಪಯೋಗ.....

🙏ಹದಿನೈದು ದಿನಗಳ ನಿರಂತರ ಓಂಕಾರದ ಪಠಣದಿಂದ ಒತ್ತಡಗಳೆಲ್ಲಾ ನಿವಾರಣೆಯಾಗಿ, ಮನಸ್ಸು ಶಾಂತವಾಗುವುದು, ಸಂಶೋಧನೆಯ ಪ್ರಕಾರ ಓಂಕಾರವು ದೇಹದಲ್ಲಿರುವ ಅಡ್ರಿನಲಿನ್‌ ಸ್ರಾವವನ್ನು ಕಡಿಮೆಗೊಳಿಸುತ್ತದೆ, ಇದರಿಂದಾಗಿ ಮಾನಸಿಕ ಒತ್ತಡವು ನಿಧಾನವಾಗಿ ಕಡಿಮೆಯಾತ್ತದೆ ಎಂದು ಹೇಳಲಾಗುತ್ತದೆ

🙏 ಇದು ಮನಸ್ಸಿನಲ್ಲಿರುವ ಭಯ, ಅಸಮಾಧಾನವನ್ನು ನಿವಾರಣೆಗೊಳಿಸುತ್ತದೆ...

🙏 "ಓಂಕಾರ"ದ ಪಠಣವು ನಿಮ್ಮ ಸುತ್ತಲಿನ ವಾತಾವರಣವನ್ನು ಶುದ್ಧಗೊಳಿಸಿ, ಧನಾತ್ಮಕ ಕಂಪನವನ್ನು ಉಂಟುಮಾಡುತ್ತದೆ...

🙏 "ಓಂಕಾರ"ದ ಉಚ್ಛಾರಣೆಯು ದೇಹದಲ್ಲಿರುವ ಎಲ್ಲಾ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ...

🙏 "ಓಂಕಾರ" ಪಠಣದಿಂದ ನಿಮ್ಮ ಹೃದಯದ ಆರೋಗ್ಯ ವೃದ್ಧಿಯಾಗುವುದು ಹಾಗೂ ರಕ್ತಸಂಚಾರವೂ ಆರೋಗ್ಯಕರವಾಗುವುದು ಜೀರ್ಣಾಂಗವ್ಯವಸ್ಥೆಯನ್ನು ಸುಧಾರಿಸುತ್ತದೆ...

🙏 "ಓಂಕಾರ"ವು ನಿಮ್ಮಲ್ಲಿರುವ ಉದಾಸೀನತೆಯನ್ನು ಬದಿಗೆ ಸರಿಸಿ, ಉತ್ಸಾಹವನ್ನು ಹೆಚ್ಚಿಸುತ್ತದೆ

ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ, ಮಲಗುವ ಮುನ್ನ 5ನಿಮಿಷ ಓಂಕಾರವನ್ನು ಪಠಿಸಿ...

🙏 "ಓಂಕಾರ"ದ ಪಠಣದಿಂದ ಶ್ವಾಸಕೋಶದ ಸಾಮರ್ಥ್ಯ ಹೆಚ್ಚುವುದು..

🙏 ಮನುಷ್ಯನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯವನ್ನು ಹೆಚ್ಚಿಸುವುದು...

🙏 "ಓಂಕಾರ" ಪದವನ್ನು ಉಚ್ಚರಿಸುವಾಗ ನಿಮ್ಮ ದೇಹದಲ್ಲಿ ಉಂಟಾಗುವ ಕಂಪನವನ್ನು ಗಮನಿಸಬಹುದು, ಈ ಕಂಪನವು ಬೆನ್ನು ಮೂಳೆಗೆ ಒಳ್ಳೆಯದು. ಇದರಿಂದಾಗಿ ಬೆನ್ನುಮೂಳೆಯ ಕಾರ್ಯಕ್ಷಮತೆ ಹೆಚ್ಚಾಗುವುದು...

🙏 "ಓಂಕಾರ"ದ ಉಚ್ಚಾರಣೆಯು ಗಂಟಲಿನ ಆರೋಗ್ಯಕ್ಕೂ ಒಳ್ಳೆಯದು, ಇದು ಥೈರಾಯ್ಡ್‌ ಗ್ರಂಥಿಯನ್ನು ಆರೋಗ್ಯವಾಗಿಡುವುದು...

🙏 "ಓಂಕಾರ" ಪದವು ನಿಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪ್ರವಹಿಸಿ, ಯಾವುದೇ ಕೆಲಸದಲ್ಲೂ ನಿಮ್ಮ ಆತ್ಮವಿಶ್ವಾಸ ವೃದ್ಧಿಯಾಗುವಂತೆ ಮಾಡುತ್ತದೆ.

ಏಕಾಗ್ರತೆಯು ವೃದ್ಧಿಯಾಗಿ, ನಿಮ್ಮ ಗುರಿಯನ್ನು ಸಾಧಿಸಲು ಓಂಕಾರವು ಸಹಕರಿಸುವುದು..

🙏 "ಓಂಕಾರ" ಪಠಣವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಸ್ವಯಂಪ್ರತಿರೋಧಕವನ್ನು ಉಂಟುಮಾಡುವುದು...

🙏 "ಓಂಕಾರ"ವನ್ನು ಪಠಿಸುವವರಿಗೆ ಮಾತ್ರವಲ್ಲದೇ, ಅವರ ಸುತ್ತಮುತ್ತಲಿನವರೂ ಓಂಕಾರದ ಕಂಪನವನ್ನು ಅನುಭವಿಸುವುದರಿಂದ ಇತರರಿಗೂ ಉಪಯೋಗವಾಗುವುದು...

🙏 "ಓಂಕಾರ"ವನ್ನು ಪಠಿಸುವುದರಿಂದ ನಿಮ್ಮ ಭಾವನೆಗಳ ಮೇಲೆ ನಿಯಂತ್ರಣವನ್ನು ಸಾಧಿಸಬಹುದು...

ನೀವು ಮೊದಲ ಬಾರಿ "ಓಂಕಾರ" ಪಠಣ ಆರಂಭಿಸುತ್ತಿದ್ದಲ್ಲಿ ಪ್ರತಿದಿನ 5 ನಿಮಿಷ ಮಾತ್ರ ಮಾಡಿ. 

ಪ್ರತಿದಿನ ಅಭ್ಯಾಸ ಮಾಡುತ್ತಾ ಹಿಡಿತ ಬಂದಂತೆ ಸಮಯವನ್ನು ನಿಧಾನವಾಗಿ ವಿಸ್ತರಿಸುತ್ತಾ ಬನ್ನಿ. 

ಆರಂಭದಲ್ಲೇ 5 ನಿಮಿಷಕ್ಕಿಂತ ಹೆಚ್ಚು ಅಭ್ಯಾಸ ಮಾಡಿದರೆ ದೇಹದಲ್ಲಿ ಉಂಟಾಗುವ ಶಕ್ತಿಯ ಕಂಪನದಿಂದ ಬಾಧೆಗೊಳಗಾಗಬಹುದು. ಯಾಕೆಂದರೆ ಓಂ ಜಪವು ದೇಹದ ಉ‍ಷ್ಣತೆಯನ್ನು ಹೆಚ್ಚಿಸುತ್ತದೆ.... 

"ಓಂಕಾರ"ದಲ್ಲಿ ಧ್ವನಿ ತರಂಗ ಹಾಗೂ ನಾದಕ್ಕೆ ಭೌತ ಶಾಸ್ತ್ರೀಯ ಮಹತ್ವಗಳನ್ನು ಇವೆ. ಓಂಕಾರದಲ್ಲಿ "ಉ" ಕಾರ, "ಅ" ಕಾರ ಹಾಗೂ "ಮ ಕಾರ" ಗಳು ಸೇರುವುದರಿಂದ ಅವುಗಳನ್ನು ಒಟ್ಟಿಗೆ ಉಚ್ಛಾರ ಮಾಡಿದಾಗ ಹೊಟ್ಟೆ ಬೆನ್ನು ಹುರಿ ಗಂಟಲು ಮೂಗು ಹಾಗೂ ಮೆದುಳಿನ ಭಾಗಗಳು ಕ್ರಿಯಾಶೀಲಾ ಆಗುತ್ತವೆ ಇದರಿಂದ ಏಕಾಗ್ರತೆ ಹೆಚ್ಚುತ್ತದೆ ಮನಸ್ಸಿಗೆ ಶಾಂತಿಯು ದೊರೆಯುತ್ತದೆ ಹಾಗೂ ನಮ್ಮ ಒತ್ತಡವೂ ಸಹಾ ಕಡಿಮೆ ಆಗುತ್ತದೆ.

"ಓಂಕಾರ" ಎಂಬ ಶಕ್ತಿ,ಧ್ಯಾನ ಎಂಬ ಸಾಧನ

🙏🙏🙏🙏🙏🙏🙏🙏🙏🙏🙏🙏

"ಓಂಕಾರ" ಮಂತ್ರದ ಮಹತ್ವ

ಪ್ರಣವ ಮಂತ್ರವನ್ನು ಜಪಿಸುತ್ತಿದ್ದಾನೆ ಸೂರ್ಯ !

ಹಲವು ವರ್ಷಗಳ ನಿರಂತರ ಅಧ್ಯಯನದಿಂದ ವಿಜ್ಞಾನಿಗಳು ಶೋಧಿಸಿದ ವೈಜ್ಞಾನಿಕ ಸತ್ಯ..!!

ಜಗತ್ಪ್ರಸಿದ್ಧ ವೈಜ್ಞಾನಿಕ ಸಂಸ್ಥೆ NASA ಹಲವು ಸಂಶೋಧನೆಗಳ ನಂತರ, ಸೂರ್ಯನಿಂದ ಪ್ರತಿಕ್ಷಣವೂ ಹೊರಹೊಮ್ಮುವ ಧ್ವನಿಯನ್ನು ರೆಕಾರ್ಡ್ ಮಾಡಿತು. ಆ ಧ್ವನಿಯನ್ನು ಕೇಳಿದ ವಿಜ್ಞಾನಿಗಳಿಗೆ ಅಚ್ಚರಿ…!! ವೇದಗಳಲ್ಲಿ ಗುಣಗಾನ ಮಾಡಲಾಗಿರುವ , ಸನಾತನ ಧರ್ಮದ ಪವಿತ್ರ ಮಂತ್ರ "ಓಂಕಾರ"..

ಇನ್ನೂ ಅಚ್ಚರಿಯೆಂದರೆ , ಸಾಮಾನ್ಯ ಮನುಷ್ಯ 20 ಮೆಗಾ ಹರ್ಟ್ಸಿನಿಂದ 2೦೦೦೦ ಮೆಗಾ ಹರ್ಟ್ಸ್ ಮಧ್ಯದ ಧ್ವನಿಯನ್ನಷ್ಟೇ ಕೇಳಬಲ್ಲ. ಅದಕ್ಕಿಂತ ಹೆಚ್ಚು ಅಥವಾ ಕಡಿಮೆ ಶಬ್ದವನ್ನು ಮನುಷ್ಯ ಗ್ರಹಿಸಲಾರ ಎಂದು ವಿಜ್ಞಾನ ತಿಳಿಸುತ್ತದೆ. ಆದರೆ ಸೂರ್ಯನಿಂದ ಬರುವ ಈ ಓಂಕಾರನಾದವನ್ನು ನಮ್ಮ ಋಷಿಮುನಿಗಳು ಅರಿತಿದ್ದಾದರೂ ಹೇಗೆ ಎಂಬುದೇ ಅಚ್ಚರಿ...!!

ವೇದಗಳಲ್ಲಿ ಕೊಂಡಾಡಿದ್ದು ಹೇಗೆ..? 

ಓಂಕಾರವನ್ನು ಮಹಾಮಂತ್ರವೆಂದು ಸ್ವೀಕರಿಸಿದ್ದು ಹೇಗೆ..? ಪ್ರಶ್ನೆಗಳು ಈಗಲೂ ವಿಜ್ಞಾನಿಗಳನ್ನ ಕಾಡುತ್ತಿವೆ..!!

ನಮ್ಮ ಋಷಿಗಳ ಪ್ರಕಾರ "ಓಂಕಾರ"ವೇ ಪರಮಾತ್ಮನ ನಿಜವಾದ ಹೆಸರು.

”ಓಮಿತ್ಯೇಕಾಕ್ಷರಂ ಬ್ರಹ್ಮ”. ಮಹರ್ಷಿ ಪತಂಜಲಿ ತಿಳಿಸುವಂತೇ “ತಸ್ಯ ವಾಚಕಃ ಪ್ರಣವಃ” ಪ್ರಣವವೆಂದರೆ “ಓಂಕಾರ”......

ಸೂರ್ಯನಿಂದ ಓಂಕಾರನಾದ ಬರಲು ಕಾರಣವಾದರೂ ಏನು..? ಇದಕ್ಕೆ ಉತ್ತರ ಗೀತೆಯಲ್ಲಿದೆ..

👇👇👇

ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ:- “ಅರ್ಜುನ, ನಿನಗಿಂದು ಯಾವ ವಿದ್ಯೆಯನ್ನು ನಾನು ಉಪದೇಶಿಸಿದೆನೋ ಈ ವಿದ್ಯೆಯನ್ನು ನಿನಗಿಂತಲೂ ಮೊದಲು ಸೂರ್ಯನಿಗೆ ಉಪದೇಶಿಸಿದ್ದೆ. ಅಂದಿನಿಂದ ಸೂರ್ಯ ನಿರಂತರವಾಗಿ ಓಂಕಾರವನ್ನು ಜಪಿಸುತ್ತಾ ಲೋಕವನ್ನು ಬೆಳಗುತ್ತಿದ್ದಾನೆ. ಕೇವಲ ಸೂರ್ಯನಷ್ಟೇ ಅಲ್ಲ. ಸಮಸ್ತ ಬ್ರಹ್ಮಾಂಡವೂ ಓಂಕಾರದಲ್ಲೇ ಅಧೀನವಾಗಿದೆ”....

ಅಂದರೆ ವಿಜ್ಞಾನಿಗಳು ಇಂದು ಕಂಡುಹಿಡಿದ ಸತ್ಯವು, ಋಷಿ-ಮುನಿಗಳಿಗೆ , ಕೃಷ್ಣನಿಗೆ ಅಂದೇ ತಿಳಿದಿತ್ತು..!!

ಯಾವಾಗ ನಾವು "ಓಂ" ಎಂದು ಜೋರಾಗಿ ಉಚ್ಚರಿಸುತ್ತೇವೋ ಆಗ ನಮ್ಮ ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳು ಖಾಲಿಯಾಗುತ್ತವೆ.

ಓಂಕಾರದ ಜಪ ತೀವ್ರವಾಗುತ್ತಿದ್ದಂತೇ , ಬ್ರಹ್ಮಾಂಡದಲ್ಲಿರುವ ಓಂಕಾರ ಹಾಗೂ ಸಾಧಕನ ಓಂಕಾರನಾದಗಳ ಸಮ್ಮಿಲನವಾಗುತ್ತದೆ.

ಆ ಸಮಯದಲ್ಲಿ ಸಾಧಕನ ಮನಸ್ಸು ಧ್ಯಾನದಲ್ಲಿ ಕಳೆದುಹೋಗುತ್ತದೆ. ಈ ಅವಸ್ಥೆಯಲ್ಲಿ ಮನಸ್ಸು ಚೇತನದೊಂದಿಗೆ ಸೇರಿಕೊಳ್ಳುತ್ತದೆ..🙏

(ಸಂಗ್ರಹ)


ಸನಾತನವೇ ಸತ್ಯ, ಸನಾತನವೇ ಶ್ರೇಷ್ಠ...🙏🏻😍🚩

ಸನಾತನವೇ ವಿಶ್ವ ಧರ್ಮ...🙏🏻😍

"ದೇವರ ಮನೆ ಮತ್ತು ಪೂಜೆ"

 ಶುಕ್ರವಾರ, ಮಾರ್ಚ್ 20, 2026 

WhatsApp forwarded

"ದೇವರ ಮನೆ ಮತ್ತು ಪೂಜೆ" ಯ ವಿಷಯಗಳು..

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ..

೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ..

೩. ದೇವರ ಮನೆಯಲ್ಲಿ ಗುಡಿಸೋ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು.  

೪. ದೇವರ ಮನೆಯನ್ನು ಅರಿಸಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ,ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ..

೫. ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ "ನೈವೇದ್ಯ "ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು..

೬. ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು..

೭. ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ..

(ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು)

೮. ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಾಮಿಯ ಮರುದಿನ ದೇವರ ವಿಗ್ರಹಗಲಕನ್ನು "ಅರಿಸಿನದ ನೀರಿನಿಂದ ಶುದ್ಧ ಮಾಡಿ..

೯. ದೇವರ ಪೂಜೆಗೆ "ಆಂಜನೇಯ" ಸ್ವಾಮಿ ಇರೋ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆಬಾರಿಸಬೇಕು..

೧೦. ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗೋಕೆ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ..

೧೧. ದೇವರ ಪೂಜೆ ಮಾಡೋವಾಗ ಆಕಳಿಕೆ ,ಕೋಪ, ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ..

೧೨. ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ..

೧೩. ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು..

ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು..ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ..

೧೪. ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದದಾರೂ ಧರಿಸದೇ ಪೂಜೆ ಮಾಡಬಾರದು..

ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು..

೧೫. ದೇವರ ಪೂಜೆಗೆ "ಹಸಿಯಾದ ಹಾಲನ್ನು ಮಾತ್ರ ಬಳಸಿ..

೧೬. ದೇವರ ನೈವೇದ್ಯ ಮಾಡೋವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ..

ನೈವೇದ್ಯ ಮಾಡೋವಾಗ "ತುಳಸೀಪತ್ರೆಯನ್ನು" ಬಳಸಬೇಕು..

೧೭. ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ..

೧೮. ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ..

೧೯. ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..

ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ ನಮಗೆ ರಕ್ಷಣೆ..

ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು "ಮನೆದೇವರೇ.."!

೨೦. ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ "ಮಹಾಲಕ್ಷ್ಮೀ" ಸಾನಿಧ್ಯ ಇರುತ್ತದೆ..

೨೧. "ಶ್ರೀ ಚಕ್ರ" , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದ ಕಾಣಿಸೋ ಮಹಾಲಕ್ಷ್ಮೀ .. ಇತ್ಯಾದಿ ಈ ದೇವರುಗಳೆಲ್ಲಾ "ಅಷ್ಟೈಶ್ವರ್ಯಗಳನ್ನು ಪ್ರಧಾನಿಸೋ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ..


ಸಂಗ್ರಹ ಮಾಡಿದ್ದು

https://chat.whatsapp.com/GxE1TOKoqedCln5XUwZEcM?mode=gi_t

Thursday, March 19, 2026

BHAJANE / SATSANG AT SUNANDI - 53

 Thursday, March 19, 2026

Sunandi Holistic Eldercare, Kodigehalli, Bengaluru.

In the absence of Ramakrishna Bhat (Who had travelled to USA), Jayaram Suvarna (Yoga Jayaram) and myself  condusted divine session of  Bhajans / Satsang for the elders of the centre.




It's heartening to note that a few of the inmates of the centre, anxiously waiting to sing Bhajans and involve themselves in the praise of God and Naama sankeerthane.




As today is Chandramana Yugadi, after wishing them HAPPY YUGADI to all, a brief importance of Yugadi was narrated right from the time of Brahma, and through Dashaavatara, and as of today, it is celebrated as beginning of new "PARAABHAVA" naama SAMVATSARA and wished all good health and happiness.



After the Mangala song "Shankaraaya...." , Aarthi was performed, Vibhoothi given and Prasada prepared at home was distributed to all.

It was a refershing and divine session.

Lokaa Samastaa Sukhino Bhavanthooo...

Om Shanthi, Shanthi , Shanthi.....


Posted  20/3/2026