Monday, July 27, 2026

ಜುಲೈ ತಿಂಗಳ ಕಾರ್ಯಕ್ರಮ - ವಿಶೇಷ ಉಪನ್ಯಾಸ

 ಭಾನುವಾರ, ಜುಲೈ 26, 2026 

ತರಳಬಾಳು ಕೇಂದ್ರ ಗ್ರಂಥಾಲಯ, ಆರ್. ಟಿ. ನಗರ, ಬೆಂಗಳೂರು. 


ಜುಲೈ ತಿಂಗಳ ಶಿವರಾಮ ಕಾರಂತ ವೇದಿಕೆಯ  ಕಾರ್ಯಕ್ರಮದಲ್ಲಿ ಡಾ ರಾಜಶೇಖರ ನಾಗುರ ಅವರು ಅತಿಥಿಗಳಾಗಿ " ಪ್ರಾಚೀನ ಕನ್ನಡ ಸಾಹಿತ್ಯ ಹಾಗೂ ಆಧುನಿಕ ಕನ್ನಡ ಸಾಹಿತ್ಯ ಬೆಳೆದು ಬಂದ ಹಾದಿ" ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. 

ಹದಿನೈದು ನಿಮಿಷಗಳ ಕಾಲ ಉಪಹಾರ ಸೇವನೆ, ಮುಖ್ಯ ಅತಿಥಿಗಳ ಆಗಮನ, ಎಲ್ಲವೂ ಸಿದ್ಧವಾಯಿತು. 4.15 ಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭವಾಯಿತು.
ಮೊದಲಿಗೆ ಮುಖ್ಯ ಅತಿಥಿಗಳಾದ ಡಾ.ಶ್ರೀ ರಾಜಶೇಖರ ನಾಗೂರರನ್ನು ವೇದಿಕೆಗೆ ಆಹ್ವಾನಿಸಲಾಯಿತು.ಜೊತೆಗೆ ನಮ್ಮ ಉಪಾಧ್ಯಕ್ಷರು ಕೂಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಂತರ ಕುಮಾರಿ ಅದ್ವಿಕಾ. ಎನ್. ಕೆನ್ ಶ್ರೀ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯು ಚಂದದ "ಪಿಳ್ಳoಗೋವಿಯ ಚೆಲ್ವ ಕೃಷ್ಣನ ಎಲ್ಲಿ ನೋಡಿದಿರಿ "ಎಂಬ ಪ್ರಾರ್ಥನೆಯನ್ನೂ ಮಾಡುತ್ತ ಕಾರ್ಯಕ್ರಮಕ್ಕೆ ಮೆರುಗು ತಂದು ಕೊಟ್ಟಳು. ನಂತರ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ವೀರಶೇಖರ ಸ್ವಾಮಿಗಳು ಮುಖ್ಯ ಅತಿಥಿಗಳಿಗೆ ಹಾಗೂ ಸಭೆಗೆ ಸ್ವಾಗತ ಕೋರಿದರು.

ಇದಾದ ಬಳಿಕ, 
ಮುಖ್ಯ ಅತಿಥಿಗಳು ಸಭೆಯನ್ನು ಕುರಿತು ಅತ್ಯಂತ ಹೆಮ್ಮೆಯ ನುಡಿಗಳನ್ನು ಆಡುತ್ತಾ, ತಮಗೆ ಒದಗಿ ಬಂದ ಅವಕಾಶಕ್ಕಾಗಿ ಹಿರಿಯ ಕವಿಮಹಾಶಯರಿಗೆ ವಂದಿಸುತ್ತಾ, ಕಾರಂತರ ನಾಮಸ್ಮರಣೆ ಮಾಡುತ್ತಾ "ಪ್ರಾಚೀನ ಕನ್ನಡ ಸಾಹಿತ್ಯ ಮತ್ತು ಆಧುನಿಕ ಕನ್ನಡ ಸಾಹಿತ್ಯ ಬೆಳೆದು ಬಂದ ಹಾದಿ "ಈ ಕುರಿತು ತಮ್ಮ ಅಮೂಲ್ಯವಾದ ನುಡಿಗಳನ್ನು ಹೇಳುತ್ತಾ, ಕಾರ್ಯಕ್ರಮವು ಮತ್ತಷ್ಟು ಕಳೆ ಕಟ್ಟುವಂತೆ ಮಾಡಿದರು..


ರನ್ನ, ಪೊನ್ನ, ಪಂಪನ ಬಗೆಗೆ ಮಾತನಾಡುತ್ತಾ, ಆದಿ ಪುರಾಣ, ಶಾಂತಿ ಪುರಾಣ, ರನ್ನನ ಗಧಾಯುದ್ಧ, ಈ ಕುರಿತು ಅನೇಕ ಹೆಮ್ಮೆಯ ನುಡಿಗಳನ್ನು ಆಡಿದರು. ನವ್ಯ ಸಾಹಿತ್ಯದ ಕುರಿತು ಹೇಳುವಾಗ, ಭಕ್ತಿಪoಥ, ಸಾಮಾಜಿಕ ಚಳುವಳಿಗಾರರಾದ ಬಸವಣ್ಣನವರನ್ನು ಮೊದಲುಗೊಂಡು,ಅನೇಕ ಆಧುನಿಕ ಕವಿಗಳನ್ನು ಕೂಡ ತಮ್ಮ ಮಾತುಗಳಲ್ಲಿ ಸ್ಮರಣಿಸಿ ಕೊಂಡರು.

ಕುವೆಂಪು, ಬೇಂದ್ರೆ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಕಾರಂತರು ಹೀಗೆ ಎಲ್ಲರ ಸಾಹಿತ್ಯ ರಚನೆಯ ಪ್ರಾಕಾರಗಳನ್ನು ಕುರಿತು ಹೇಳುತ್ತಾ" ಸಾಹಿತ್ಯವೆನ್ನುವುದು ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಹೇಗೆ ಕಾರ್ಯಸಿದ್ಧಿಯಾಗಿದೆ, ಮತ್ತು ಸಾಹಿತ್ಯವಿಲ್ಲದ ಜೀವನ ಹೇಗೆ ಬರಡಾಗುತ್ತದೆ ಎಂಬುದರ ಕುರಿತು, ಅತ್ಯಂತ ಸ್ವಾರಸ್ಯಕರವಾಗಿ ಮಾತನಾಡಿದರು. ಸುಮಾರು 45 ನಿಮಿಷಗಳ ಕಾಲ ಹೇಗೆ ಹೋಯಿತು,ಎಂಬುದು ತಿಳಿಯಲೇ ಇಲ್ಲ.



ಉಪನ್ಯಾಸದ ನಂತರ ಶ್ರೀ ರಾಜಶೇಖರ ನಾಗುರ ಅವರನ್ನು ಶಾಲು, ಹಾರ, ಹೂಗುಚ್ಚ, ಉಡುಗೊರೆಯೊಂದಿಗೆ ಸನ್ಮಾನಿಸಲಾಯಿತು. 
ತದ ನಂತರ ಕುಮಾರಿ ಲಜಾರಿ ಭಟ್ ಅವರ  "ವೀಣಾ ವಾದನ "   ಮುಂದಿನ ಕಾರ್ಯಕ್ರಮಕ್ಕೆ ವೇದಿಕೆಯನ್ನು ಸಜ್ಜು ಗೊಳಿಸಲಾಯಿತು. 


Posted 28/6/2026





No comments:

Post a Comment